menu-iconlogo
logo

Baagilanu Theredu

logo
بول
ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೇ

ಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೆ ಬಾಗಿಲನು ತೆರೆದು

ಪರಮಪದದೊಳಗೆ ವಿಷಧರನ ತಲ್ಪದಲಿ ನೀ

ಸಿರಿಸಹಿತ ಕ್ಷೀರವಾರಿಧಿಯೊಳಿರಲೂ...

ಕರಿರಾಜ ಕಷ್ಟದಲಿ ಆದಿಮೂಲ ಎಂದು

ಕರೆಯಲಾಕ್ಷಣ ಬಂದು ಒದಗಿದೆಯೋ ನರಹರಿಯೆ ಬಾಗಿಲನು ತೆರೆದು

ಕಡುಕೋಪದಿಂ ಖಳನು ಖಡ್ಗವನೆ ಪಿಡಿದು..

ನಿನ್ನೊಡೆಯ ಎಲ್ಲಿಹನು ಎಂದು ನುಡಿಯೇ..

ಧೃಢ ಭಕುತಿಯಲು ಶಿಶುವು ಬಿಡದೆ ನಿನ್ನನು ಭಜಿಸೆ..

ಸಡಗರದಿ ಸ್ತಂಭದಿಂದೊಡೆದೆ ನರಹರಿಯೆ ಬಾಗಿಲನು ತೆರೆದು...

ಯಮಸುತನ ರಾಣಿಗೆ ಅಕ್ಷಯವಸನವನಿತ್ತೆ

ಸಮಯದಲಿ ಅಜಮಿಳನ ಪೊರೆದೇ...

ಸಮಯಾಸಮಯವುಂಟೆ ಭಕ್ತವತ್ಸಲ ನಿನಗೆ

ಕಮಲಾಕ್ಷ ಕಾಗಿನೆಲೆಯಾದಿಕೇಶವನೇ ಬಾಗಿಲನು ತೆರೆದು...

ಬಾಗಿಲನು ತೆರೆದು

ಬಾಗಿಲನು ತೆರೆದು... ಸೇವೆಯನು ಕೊಡೊ ಹರಿಯೇ